spot_img
Saturday, July 27, 2024
spot_imgspot_img
spot_img
spot_img

ವಿಧಾನ ಸಭೆಯಲ್ಲಿ ಕೃಷಿ ಭೂಮಿ ಪರಿವರ್ತನೆ ಸರಳಗೊಳಿಸುವ ಮಸೂದೆ ಮಂಡನೆ: ಮಸೂದೆಯ ಬಗ್ಗೆ ಏನಂದ್ರು ಸಚಿವರು?

ಕೃಷಿಬಿಂಬ ಸುದ್ದಿ:  ಈ ಸಲದ ಬಜೆಟ್‌ನಲ್ಲಿ ಪ್ರಸ್ತಾಪಿಸಿದಂತೆ, ಕರ್ನಾಟಕ ಭೂ ಕಂದಾಯ ಕಾಯ್ದೆ 1964 (ಕರ್ನಾಟಕ ಕಾಯ್ದೆ 12, 1964) ಕಲಂ 95ಕ್ಕೆ ತಿದ್ದುಪಡಿ ತರುವ ವಿಧೇಯಕವನ್ನು ಕಂದಾಯ ಸಚಿವ ಕೃಷ್ಣ ಬೈರೇಗೌಡ ಅವರು  ವಿಧಾನ ಸಭೆಯಲ್ಲಿ ಮಂಡಿಸಿದರು. ಈ ಮಸೂದೆಯಡಿಯಲ್ಲಿ ಯಾವುದೇ ಕೃಷಿ ಭೂಮಿಯನ್ನು ಹೊಂದಿರುವವರು ಅಂತಹ ಭೂಮಿಯನ್ನು ಅಥವಾ ಅದರ ಯಾವುದೇ ಭಾಗವನ್ನು ಬೇರೆ ಉದ್ದೇಶಕ್ಕೆ ಬಳಸಲು ಬಯಸಿದರೆ ಮತ್ತು ಅಂತಹ ಭೂಮಿ ಮಾಸ್ಟರ್ ಪ್ಲಾನ್ ಪ್ರಕಟಿಸದ ಸ್ಥಳೀಯ ಯೋಜನಾ ಪ್ರದೇಶದ ಹೊರಗಿದ್ದರೆ, ಅರ್ಜಿದಾರರು ಭೂ ಪರಿವರ್ತನೆಗಾಗಿ ಅರ್ಜಿಯ ಜೊತೆ ಅಫಿಡವಿಟ್ ನ್ನು ಜಿಲ್ಲಾಧಿಕಾರಿಗಳಿಗೆ ಸಲ್ಲಿಸಬಹುದಾಗಿದೆ. ಆಡಳಿತ ಮಂಡಳಿಯ ಒತ್ತಡವಿಲ್ಲದೆ ನಿಷ್ಪಕ್ಷಪಾತವಾಗಿ ರೈತರು ಮತ್ತು ಹಾಲು ಉತ್ಪಾದಕರಿಗೆ ಉತ್ತಮ ಗುಣಮಟ್ಟದ ಸೇವೆಯನ್ನು ಒದಗಿಸಲು ಇದು ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಗಳು ಮತ್ತು ಕಾರ್ಯದರ್ಶಿಗಳಿಗೆ ಸಹಾಯ ಮಾಡುತ್ತದೆ ಎಂದು ಮಸೂದೆಯಲ್ಲಿ ತಿಳಿಸಲಾಗಿದೆ.

ಅರ್ಜಿಯನ್ನು ಸ್ವೀಕರಿಸಿದ ದಿನಾಂಕದಿಂದ 30 ದಿನಗಳೊಳಗೆ ಜಿಲ್ಲಾಧಿಕಾರಿಗಳು ನಿರ್ಧರಿಸದಿದ್ದರೆ, ಬದಲಾವಣೆಗೆ ಅನುಮೋದನೆಯನ್ನು ನೀಡಲಾಗಿದೆ ಎಂದು ಪರಿಗಣಿಸಲಾಗುತ್ತದೆ.

ನೋಂದಣಿ (ಕರ್ನಾಟಕ ತಿದ್ದುಪಡಿ) ಮಸೂದೆ 2023 ನ್ನು ಇದೇ ಸಂದರ್ಭದಲ್ಲಿ ಸಚಿವರು ವಿಧಾನಸಭೆಯಲ್ಲಿ ಮಂಡಿಸಿದರು, ನಕಲಿ ಮತ್ತು ಇತರ ಅಕ್ರಮ ದಾಖಲೆಗಳ ನೋಂದಣಿಯನ್ನು ನಿರಾಕರಿಸುವ ಅಧಿಕಾರವನ್ನು ಗ್ರಾಮ ನೋಂದಣಾಧಿಕಾರಿಗಳಿಗೆ ನೀಡಲಾಗಿದೆ. ಇದು ಜಿಲ್ಲಾ ರಿಜಿಸ್ಟ್ರಾರ್‌ಗೆ ಸ್ವಯಂ ಪ್ರೇರಿತವಾಗಿ ಅಥವಾ ದೂರಿನ ಮೇಲೆ ಕೆಲವು ಪ್ರಕರಣಗಳಲ್ಲಿ ನಕಲಿ ದಾಖಲೆಗಳ ನೋಂದಣಿಯನ್ನು ರದ್ದುಗೊಳಿಸುವ ಅಧಿಕಾರವನ್ನು ನೀಡುತ್ತದೆ. ಹೊಸ ಬದಲಾವಣೆಯು ರಿಜಿಸ್ಟ್ರಾರ್ ಆದೇಶದ ವಿರುದ್ಧ ಮೇಲ್ಮನವಿ ನಿಬಂಧನೆಯನ್ನು ಸಹ ಒದಗಿಸುತ್ತದೆ.

ಯಾವುದೇ ವರ್ಗದ ಸಹಕಾರಿ ಸಂಘಗಳಿಗೆ ನೌಕರರ ಸಾಮಾನ್ಯ ವರ್ಗವನ್ನು ರೂಪಿಸಲು ಸಹಕಾರಿಯಾಗುವ ಕರ್ನಾಟಕ ಸಹಕಾರ ಸಂಘಗಳ (ತಿದ್ದುಪಡಿ) ಮಸೂದೆಯನ್ನು ನಿನ್ನೆ ಸದನದಲ್ಲಿ ಸಹಕಾರ ಸಚಿವ ಕೆ.ಎನ್.ರಾಜಣ್ಣ ಮಂಡಿಸಿದರು.ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘಗಳಲ್ಲಿ ಹಣ ದುರ್ಬಳಕೆ ಪ್ರಕರಣಗಳಿಗೆ ಇದರಿಂದ ಕಡಿವಾಣ ಹಾಕಬಹುದು.

spot_img

ಸಂಬಂಧಿತ ಲೇಖನಗಳು

spot_img
- Advertisement -spot_img

ಇತ್ತೀಚಿನ ಲೇಖನಗಳು

error: Content is protected !!

Join Our

Group